Friday, November 5, 2010

ಶಿರಡಿಯ ಸಮಾಧಿ ಮಂದಿರದಲ್ಲಿ ದೀಪಾವಳಿಯ ಅಂಗವಾಗಿ ಲಕ್ಷ್ಮೀ ಪೂಜೆ ಮತ್ತು ದೀಪೋತ್ಸವ - 5ನೇ ನವೆಂಬರ್ 2010 - ಕೃಪೆ : ಸಾಯಿ ಅಮೃತಧಾರಾ.ಕಾಂ 

ದೀಪಾವಳಿಯ ಅಂಗವಾಗಿ ಶಿರಡಿಯ ಸಮಾಧಿ ಮಂದಿರದಲ್ಲಿ ಲಕ್ಷ್ಮೀ ಪೂಜೆ ಮತ್ತು ದೀಪೋತ್ಸವ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿ ಶ್ರೀ.ಕಿಶೋರ್ ಮೋರೆ ಮತ್ತು ಶ್ರೀಮತಿ.ಮಂಜುಶ್ರೀ ಮೋರೆಯವರು ಲಕ್ಷ್ಮೀ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟೀಗಳಾದ ಬಾವು ಸಾಹೇಬ್ ವಾಕ್ಚುರೆ, ಸುರೇಶ ಗೋರಕ್ಷನಾಥ್ ವಾಬ್ಲೆ, ಅಶೋಕ್ ಕಂಬೇಕರ್, ಕೃಷ್ಣಚಂದ್ರ ಪಾಂಡೆ, ಉಪ ಕಾರ್ಯಕಾರಿ ಅಧಿಕಾರಿ ಡಾ.ಯಶವಂತ್ ಮಾನೆ ಮತ್ತಿತರರು ಹಾಜರಿದ್ದರು. 

ಲಕ್ಷ್ಮೀ ಪೂಜೆಯನ್ನು ನೆರವೇರಿಸುತ್ತಿರುವ ಶ್ರೀ.ಕಿಶೋರ್ ಮೋರೆ ಮತ್ತು ಶ್ರೀಮತಿ.ಮಂಜುಶ್ರೀ ಮೋರೆ

ಶಿರಡಿ ಸಾಯಿಬಾಬಾ ಸಂಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾದ ದೀಪೋತ್ಸವದ ಮನೋಹರ ದೃಶ್ಯ

ಕನ್ನಡ ಅನುವಾದ: ಶ್ರೀಕಂಠ ಶರ್ಮ


No comments:

Post a Comment