Wednesday, October 5, 2011

ಶ್ರೀ ಶಿರಡಿ ಸಾಯಿಬಾಬಾರವರ  93ನೇ ಪುಣ್ಯತಿಥಿ ಉತ್ಸವದ ಆಚರಣೆ - ಪ್ರಥಮ ದಿನದ ವರದಿ -  ಕೃಪೆ: ಸಾಯಿಅಮೃತಧಾರಾ.ಕಾಂ 

ಶ್ರೀ ಶಿರಡಿ ಸಾಯಿಬಾಬಾರವರ  93ನೇ ಪುಣ್ಯತಿಥಿ ಉತ್ಸವದ ಆಚರಣೆಯ ಅಂಗವಾಗಿ ಇದೇ ತಿಂಗಳ 5ನೇ ಅಕ್ಟೋಬರ್ 2011, ಬುಧವಾರ,  ಬೆಳಿಗ್ಗೆ ಶಿರಡಿ ಸಾಯಿಬಾಬಾರವರ ಚಿತ್ರಪಟ ಮತ್ತು ಪವಿತ್ರ ಶ್ರೀ ಸಾಯಿ ಸಚ್ಚರಿತ್ರೆಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಡಾ.ಏಕನಾಥ್ ಗೊಂಡ್ಕರ್, ಶ್ರೀ.ಕೃಷ್ಣಚಂದ್ರ ಪಾಂಡೆ, ಶ್ರೀ.ಸುರೇಶ ವಾಬ್ಲೆ, ಶ್ರೀ.ಅಶೋಕ್ ಕಂಬೇಕರ್, ಶ್ರೀಮತಿ.ಊರ್ಮಿಳಾ ಜಾಧವ್ ಮತ್ತು ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತರಾವ್ ಮಾನೆಯವರುಗಳು  ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. 



ಶ್ರೀ ಶಿರಡಿ ಸಾಯಿಬಾಬಾರವರ  93ನೇ ಪುಣ್ಯತಿಥಿ ಉತ್ಸವದ ಆಚರಣೆಯ ಅಂಗವಾಗಿ ಇದೇ ತಿಂಗಳ 5ನೇ ಅಕ್ಟೋಬರ್ 2011, ಬುಧವಾರ,  ಬೆಳಿಗ್ಗೆ ಶಿರಡಿ ಸಾಯಿಬಾಬಾರವರ ಪವಿತ್ರ ಪಾದುಕೆಗಳ ಪೂಜೆಯನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀಮತಿ.ಊರ್ಮಿಳಾ ಜಾಧವ್ ರವರು ನೆರವೇರಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಡಾ.ಏಕನಾಥ್ ಗೊಂಡ್ಕರ್, ಶ್ರೀ.ಕೃಷ್ಣಚಂದ್ರ ಪಾಂಡೆ, ಶ್ರೀ.ಸುರೇಶ ವಾಬ್ಲೆ, ಶ್ರೀ.ಅಶೋಕ್ ಕಂಬೇಕರ್ ಕೂಡ ಉಪಸ್ಥಿತರಿದ್ದರು. 



ಕನ್ನಡ ಅನುವಾದ:ಶ್ರೀಕಂಠ ಶರ್ಮ

No comments:

Post a Comment