Wednesday, October 26, 2011

ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ದೀಪಾವಳಿ  ಹಬ್ಬದ ಆಚರಣೆ - ಕೃಪೆ: ಸಾಯಿಅಮೃತಧಾರಾ.ಕಾಂ

ದೆಹಲಿಯ ಸಾಯಿ ಭಕ್ತರಾದ ಶ್ರೀ.ರಾಜೇಂದ್ರ ತಲ್ವಾರ್ ರವರು ನೀಡಿದ ಕಾಣಿಕೆಯನ್ನು ಬಳಸಿಕೊಂಡು ದೀಪಾವಳಿ ಹಬ್ಬದ ಅಂಗವಾಗಿ ಶಿರಡಿ ಸಾಯಿಬಾಬಾ ಸಂಸ್ಥಾನದ ಸಮಾಧಿ ಮಂದಿರದವನ್ನು ಸುಂದರವಾದ ಹೂವುಗಳ ಅಲಂಕಾರದಿಂದ ಸಿಂಗರಿಸಲಾಯಿತು. 



ದೀಪಾವಳಿ ಹಬ್ಬದ ಅಂಗವಾಗಿ ಶಿರಡಿ ಸಾಯಿಬಾಬಾ ಸಂಸ್ಥಾನದ ಸಮಾಧಿ ಮಂದಿರದಲ್ಲಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ  ಶ್ರೀ.ಕಿಶೋರ್ ಮೋರೆ ಮತ್ತು ಅವರ ಧರ್ಮಪತ್ನಿ ಶ್ರೀಮತಿ.ಮಂಜುಶ್ರೀ ಮೋರೆಯವರು ಲಕ್ಷ್ಮಿ ಪೂಜೆಯನ್ನು ನೆರವೇರಿಸಿದರು. ಆ ಸಂದರ್ಭದಲ್ಲಿ ಸಂಸತ್ ಸದಸ್ಯರಾದ ಶ್ರೀ.ಬಾವುಸಾಹೇಬ್ ವಾಕ್ಚುರೆ, ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಸುರೇಶ ವಾಬ್ಲೆ, ಡಾ.ಏಕನಾಥ್ ಗೊಂಡ್ಕರ್, ಶ್ರೀ.ಕೃಷ್ಣಚಂದ್ರ ಪಾಂಡೆ, ಶ್ರೀ.ಅಶೋಕ್ ಕಂಬೇಕರ್ ಮತ್ತು ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತ ರಾವ್ ಮಾನೆಯವರುಗಳು ಕೂಡ ಉಪಸ್ಥಿತರಿದ್ದರು. 



ದೀಪಾವಳಿ ಹಬ್ಬದ ಅಂಗವಾಗಿ ಶಿರಡಿ ಸಾಯಿಬಾಬಾ ಸಂಸ್ಥಾನದ ದೇವಾಲಯದ ಆವರಣದಲ್ಲಿರುವ ಲೇಂಡಿ ಉದ್ಯಾನವನದಲ್ಲಿ ದೇಶದೆಲ್ಲೆಡೆಯಿಂದ ಬಂದು ಸೇರಿದ್ದ ಸಾಯಿಭಕ್ತರುಗಳು ದೀಪಗಳನ್ನು ಬೆಳಗಿ ಸಂಭ್ರಮದಿಂದ ಹಬ್ಬವನ್ನು  ಆಚರಿಸಿದರು.   


 ದೀಪಾವಳಿ ಹಬ್ಬದ ಅಂಗವಾಗಿ ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆಯನ್ನು ಈ ಕಳಗಡೆ ಲಗ್ಗತ್ತಿಸಲಾಗಿದೆ. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment