Thursday, November 17, 2011

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ.ಹೆಚ್.ಡಿ.ದೇವೇಗೌಡರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ.ಹೆಚ್.ಡಿ.ದೇವೇಗೌಡರವರು ಇದೇ ತಿಂಗಳ 17ನೇ ನವೆಂಬರ್ 2011, ಗುರುವಾರ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು.  ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ಮತ್ತು ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತ ರಾವ್ ಮಾನೆಯವರುಗಳು ಕೂಡ ಉಪಸ್ಥಿತರಿದ್ದರು. 




ಸಾಯಿಬಾಬಾರವರ ಸಮಾಧಿಯ ದರ್ಶನ ಪಡೆದ ನಂತರ ಶ್ರೀ.ಹೆಚ್.ಡಿ.ದೇವೇಗೌಡ ಅವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ರವರು ಸಾಯಿಬಾಬಾರವರ ಅಮೃತ ಶಿಲೆಯ ವಿಗ್ರಹವನ್ನು ನೀಡುವ ಮುಖಾಂತರ ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತ ರಾವ್ ಮಾನೆಯವರು ಕೂಡ ಉಪಸ್ಥಿತರಿದ್ದರು.




ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment