Saturday, December 3, 2011

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ 

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ.ವಿಲಾಸ್ ರಾವ್ ದೇಶಮುಖ್ ರವರು ತಮ್ಮ ಕುಟುಂಬದವರ ಸಮೇತ ಇದೇ ತಿಂಗಳ 3ನೇ ಡಿಸೆಂಬರ್ 2011, ಶನಿವಾರ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆ ಮತ್ತು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ರವರುಗಳು ಕೂಡ ಉಪಸ್ಥಿತರಿದ್ದರು. 



ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆಯವರು ಸಾಯಿಬಾಬಾರವರ ಅಮೃತ ಶಿಲೆಯ ವಿಗ್ರಹವನ್ನು ನೀಡುವ ಮುಖಾಂತರ ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ಮತ್ತು ಶಿರಡಿ ನಗರಸಭೆಯ ಅಧ್ಯಕ್ಷೆಯಾದ ಶ್ರೀಮತಿ.ಶಾಲಿನಿ ತಾಯಿ ವಿಕ್ಹೇ ಪಾಟೀಲ್ ರವರುಗಳು ಕೂಡ ಉಪಸ್ಥಿತರಿದ್ದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment