Saturday, December 10, 2011

ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಶ್ರೀ ದತ್ತ ಜಯಂತಿಯ ಆಚರಣೆ - ಕೃಪೆ: ಸಾಯಿಅಮೃತಧಾರಾ.ಕಾಂ 

ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಇದೇ ತಿಂಗಳ 10ನೇ ಡಿಸೆಂಬರ್ 2011, ಶನಿವಾರದಂದು ಶ್ರೀ ದತ್ತ ಜಯಂತಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಯಿತು. ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ.ಕಿಶೋರ್ ಮೋರೆ ಮತ್ತು ಅವರ ಧರ್ಮಪತ್ನಿ ಶ್ರೀಮತಿ.ಮಂಜುಶ್ರೀ ಮೋರೆಯವರು ಶಿರಡಿ ಸಾಯಿಬಾಬಾ ಸಂಸ್ಥಾನದ ಆವರಣದಲ್ಲಿರುವ ಲೇಂಡಿ ಉದ್ಯಾನವನದಲ್ಲಿ ನೂತನವಾಗಿ ಪ್ರತಿಷ್ಟಾಪಿಸಲಾಗಿರುವ ದತ್ತಾತ್ರೇಯರ ಅಮೃತ ಶಿಲೆಯ ವಿಗ್ರಹಕ್ಕೆ ಅಭಿಷೇಕ ಪೂಜೆಯನ್ನು ನೆರವೇರಿಸಿದರು. 



ಶ್ರೀ ದತ್ತ ಜಯಂತಿಯ ಅಂಗವಾಗಿ ದೆಹಲಿಯ ಸಾಯಿಭಕ್ತೆ ಶ್ರೀಮತಿ.ರಜನಿ ದಾಂಗ್ ರವರು ನೀಡಿದ ಕಾಣಿಕೆಯಿಂದ ಶಿರಡಿ ಸಾಯಿಬಾಬಾ ಸಂಸ್ಥಾನದ ಸಮಾಧಿ ಮಂದಿರ ಮತ್ತು ಪ್ರಾಂಗಣವನ್ನು ಸುಂದರವಾದ ಹೂವುಗಳಿಂದ ಅಲಂಕರಿಸಲಾಯಿತು. 




ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment