Wednesday, December 7, 2011

ಪಂಜಾಬ್ ರಾಜ್ಯಪಾಲರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ  

ಪಂಜಾಬ್ ರಾಜ್ಯಪಾಲರಾದ ಶ್ರೀ.ಶಿವರಾಜ್ ಪಾಟೀಲ್ ರವರು ಇದೇ ತಿಂಗಳ 7ನೇ ಡಿಸೆಂಬರ್ 2011, ಬುಧವಾರ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಮಾಜಿ ಕೇಂದ್ರ ಮಂತ್ರಿಗಳಾದ ಶ್ರೀ.ಪದ್ಮಭೂಷಣ ಬಾಳಾಸಾಹೇಬ್ ವಿಕ್ಹೆ ಪಾಟೀಲ್, ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ಮತ್ತು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ.ಕಿಶೋರ್ ಮೋರೆಯವರು ಕೂಡ ಉಪಸ್ಥಿತರಿದ್ದರು.



ಸಮಾಧಿ ದರ್ಶನದ ನಂತರ ಶ್ರೀ.ಶಿವರಾಜ್ ಪಾಟೀಲ್ ರವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ರವರು ಸಾಯಿಬಾಬಾರವರ ಅಮೃತಶಿಲೆಯ ವಿಗ್ರಹವನ್ನು ನೀಡುವ ಮುಖಾಂತರ ಸನ್ಮಾನಿಸಿದರು. ಆ ಸಂದರ್ಭದಲ್ಲಿ ಮಾಜಿ ಕೇಂದ್ರ ಮಂತ್ರಿಗಳಾದ ಶ್ರೀ.ಪದ್ಮಭೂಷಣ ಬಾಳಾಸಾಹೇಬ್ ವಿಕ್ಹೆ ಪಾಟೀಲ್ ಮತ್ತು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ.ಕಿಶೋರ್ ಮೋರೆಯವರು ಕೂಡ ಉಪಸ್ಥಿತರಿದ್ದರು.


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment