Thursday, February 16, 2012

ಶ್ರೀ.ಕೆ.ಹೆಚ್.ಮುನಿಯಪ್ಪ ಮತ್ತು ಶ್ರೀ.ಹರ್ಷವರ್ಧನ ಪಾಟೀಲ್ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ


ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವರಾದ ಶ್ರೀ.ಕೆ.ಹೆಚ್.ಮುನಿಯಪ್ಪ ಮತ್ತು ಮಹಾರಾಷ್ಟ್ರ ರಾಜ್ಯದ ಸಹಕಾರ ಹಾಗೂ ಸಂಸದೀಯ ವ್ಯವಹಾರ ಖಾತೆ ಸಚಿವರಾದ ಶ್ರೀ.ಹರ್ಷವರ್ಧನ ಪಾಟೀಲ್ ರವರುಗಳು ತಮ್ಮ ಕುಟುಂಬ ಸಮೇತರಾಗಿ ಇದೇ ತಿಂಗಳ 16ನೇ ಫೆಬ್ರವರಿ 2012,ಗುರುವಾರ ದಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆ ಮತ್ತು ಟ್ರಸ್ಟಿ ಶ್ರೀ.ಅಶೋಕ್ ಕಂಬೇಕರ್ ರವರುಗಳು ಕೂಡ ಉಪಸ್ಥಿತರಿದ್ದರು.


ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಮಹಾರಾಷ್ಟ್ರ ರಾಜ್ಯದ ಸಹಕಾರ ಹಾಗೂ ಸಂಸದೀಯ ವ್ಯವಹಾರ ಖಾತೆ ಸಚಿವರಾದ ಶ್ರೀ.ಹರ್ಷವರ್ಧನ ಪಾಟೀಲ್ ರವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆಯವರು ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಪಾಂಡುರಂಗ ಅಭಂಗ್ ರವರು ಕೂಡ ಉಪಸ್ಥಿತರಿದ್ದರು.


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment