Tuesday, October 23, 2012

ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಶ್ರೀ ಸಾಯಿಬಾಬಾರವರ 94ನೇ ಪುಣ್ಯತಿಥಿಯ ಆಚರಣೆಯ ಒಂದು ವರದಿ - ಕೃಪೆ: ಸಾಯಿಅಮೃತಧಾರಾ.ಕಾಂ

ಶ್ರೀ ಸಾಯಿಬಾಬಾರವರ 94ನೇ ಪುಣ್ಯತಿಥಿಯ ಅಂಗವಾಗಿ 23ನೇ ಅಕ್ಟೋಬರ್ 2012, ಮಂಗಳವಾರದಂದು ನಡೆದ ಮೊದಲ ದಿನದ ಕಾರ್ಯಕ್ರಮದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಕಿಶೋರ್ ಮೋರೆಯವರು ಪವಿತ್ರ ಶ್ರೀ ಸಾಯಿ ಸಚ್ಚರಿತ್ರೆಯ ಮೊದಲನೇ ಅಧ್ಯಾಯವನ್ನು ಪಾರಾಯಣ ಮಾಡುವ ಮೂಲಕ ಅಖಂಡ ಶ್ರೀ ಸಾಯಿ ಸಚ್ಚರಿತ್ರೆಯ ಪಾರಾಯಣವನ್ನು ಉದ್ಘಾಟಿಸಿದರು. 



ಶ್ರೀ ಸಾಯಿಬಾಬಾರವರ 94ನೇ ಪುಣ್ಯತಿಥಿಯ ಅಂಗವಾಗಿ 23ನೇ ಅಕ್ಟೋಬರ್ 2012, ಮಂಗಳವಾರದಂದು ನಡೆದ ಮೊದಲ ದಿನದ ಕಾರ್ಯಕ್ರಮದಲ್ಲಿ ಶ್ರೀ ಸಾಯಿಬಾಬಾರವರ ವಿಗ್ರಹ, ಪವಿತ್ರ ಶ್ರೀ ಸಾಯಿ ಸಚ್ಚರಿತ್ರೆ ಹಾಗೂ ವೀಣೆಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ಮೆರವಣಿಗೆಯಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಕಿಶೋರ್ ಮೋರೆ, ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತರಾವ್ ಮಾನೆ ಹಾಗೂ ದೇವಾಲಯದ ಮೇಲ್ವಿಚಾರಕರಾದ ಶ್ರೀ.ರಾಮರಾವ್ ಶೆಲ್ಕೆಯವರು ಭಾಗವಹಿಸಿದ್ದರು.  



ಕನ್ನಡ ಅನುವಾದ:ಶ್ರೀಕಂಠ ಶರ್ಮ  

No comments:

Post a Comment