Tuesday, January 1, 2013

ಕೇಂದ್ರ ಬೃಹತ್ ಕೈಗಾರಿಕೆ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಕೇಂದ್ರ ಬೃಹತ್ ಕೈಗಾರಿಕೆ ಸಚಿವರಾದ ಶ್ರೀ.ಪ್ರಫುಲ್ ಪಟೇಲ್ ರವರು ತಮ್ಮ ಕುಟುಂಬದ ಸದಸ್ಯರೊಡನೆ ಇದೇ ತಿಂಗಳ 1ನೇ ಜನವರಿ 2013, ಮಂಗಳವಾರದಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತರಾವ್ ಮಾನೆಯವರು ಕೂಡ ಉಪಸ್ಥಿತರಿದ್ದರು. 
 
 

ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಕೇಂದ್ರ ಬೃಹತ್ ಕೈಗಾರಿಕೆ ಸಚಿವರಾದ ಶ್ರೀ.ಪ್ರಫುಲ್ ಪಟೇಲ್  ರವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತರಾವ್ ಮಾನೆಯವರು ಸನ್ಮಾನಿಸಿದರು. 
 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment