Tuesday, January 8, 2013

ಹೇಮಾಡಪಂತರ ಶ್ರೀ ಸಾಯಿ ಸಚ್ಚರಿತ್ರೆಯ ಕನ್ನಡ ಗದ್ಯರೂಪದ ಬಿಡುಗಡೆ ಸಮಾರಂಭ - ಕೃಪೆ: ಸಾಯಿಅಮೃತಧಾರಾ.ಕಾಂ

ದಿವಂಗತ ಶ್ರೀ ಹೇಮಾಡಪಂತರ ಮೇರು ಕೃತಿಯಾದ ಶ್ರೀ ಸಾಯಿ ಸಚ್ಚರಿತ್ರೆಯ ಮರಾಠಿ ಗದ್ಯಾನುವಾದವನ್ನು ಪುಣೆಯ ಶ್ರೀ.ಪವಾರ್ ಕಾಕಾರವರು ಬಹಳ ಸುಂದರವಾಗಿ ಮಾಡಿರುತ್ತಾರೆ. ಅದರ ಕನ್ನಡ ಅನುವಾದವನ್ನು ಮುಂಬೈನ ಶ್ರೀ.ಸಿ.ಎಸ್.ದಿನೇಶ್ ರವರು ಮಾಡಿದ್ದು ಅದರ ಲೋಕಾರ್ಪಣೆ ಸಮಾರಂಭವು ಇದೇ ತಿಂಗಳ 31ನೇ ಜನವರಿ 2013, ಗುರುವಾರದಂದು ಬೆಂಗಳೂರಿನ ತ್ಯಾಗರಾಜನಗರದ ಶ್ರೀ.ಸಾಯಿ ಆಧ್ಯಾತ್ಮಿಕ ಕೇಂದ್ರದಲ್ಲಿ ಬೆಳಿಗ್ಗೆ 11:00 ಗಂಟೆಗೆ ನಡೆಯಲಿದ್ದು, ಬೆಂಗಳೂರಿನ ಚಿನ್ಮಯ ಮಿಷನ್ ನ ಪರಮ ಪೂಜ್ಯ ಶ್ರೀ.ಬ್ರಹ್ಮಾನಂದ ಸ್ವಾಮೀಜಿಯವರು ಈ ಮಹೋನ್ನತ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.

ಅನುವಾದಕರಾದ ಶ್ರೀ.ಸಿ.ಎಸ್.ದಿನೇಶ್ ರವರು ಕನ್ನಡದ ಪ್ರಸಿದ್ಧ ಕವಿಗಳಾದ ದಿವಂಗತ ಡಾ.ಡಿ.ವಿ.ಗುಂಡಪ್ಪನವರ "ಮಂಕುತಿಮ್ಮನ ಕಗ್ಗ" ದ ವಿವರಣೆಗಳಿಂದ ಕೃತಿಯನ್ನು ಬಹಳ ಸುಂದರವಾಗಿ ಅಲಂಕರಿಸಿದ್ದಾರೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಹಾಗೂ ಲೋಕಾರ್ಪಣೆಗೊಳ್ಳಲಿರುವ ಶ್ರೀ.ಸಾಯಿ ಸಚ್ಚರಿತ್ರೆಯ ಮುಖಪುಟ ಹಾಗೂ ಹಿಂಬದಿಯ ರಕ್ಷಾಪುಟವನ್ನು ಸಾಯಿ ಭಕ್ತರ ಅವಗಾಹನೆಗಾಗಿ ಈ ಕೆಳಗೆ ಲಗತ್ತಿಸಲಾಗಿದೆ: 



ಕನ್ನಡ ಅನುವಾದ: ಶ್ರೀಕಂಠಶರ್ಮ

No comments:

Post a Comment