Thursday, April 18, 2013

ಶಿರಡಿ ಸಾಯಿಬಾಬಾ ಸಂಸ್ಥಾನ ವತಿಯಿಂದ ಶ್ರೀ ರಾಮನವಮಿ ಉತ್ಸವದ ಆಚರಣೆ - ಮೊದಲನೇ ದಿನದ ವರದಿ - ಕೃಪೆ: ಸಾಯಿಅಮೃತಧಾರಾ.ಕಾಂ 

ಶ್ರೀ ರಾಮನವಮಿ ಉತ್ಸವದ ಮೊದಲನೆಯ ದಿನದ ಅಂಗವಾಗಿ ಇದೇ ತಿಂಗಳ 18ನೇ ಏಪ್ರಿಲ್ 2013, ಗುರುವಾರದಂದು ಸಾಯಿಬಾಬಾರವರ ಭಾವಚಿತ್ರ, ವಿಗ್ರಹ, ವೀಣೆ ಮತ್ತು ಪವಿತ್ರ ಶ್ರೀ ಸಾಯಿ ಸಚ್ಚರಿತ್ರೆಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ  ಶ್ರೀ.ಕಿಶೋರ್ ಮೋರೆ, ಉಪ ಕಾರ್ಯಕಾರಿ ಅಧಿಕಾರಿ ಡಾ.ಯಶವಂತ್ ರಾವ್ ಮಾನೆ, ಅಧೀಕ್ಷಕರಾದ ಶ್ರೀ.ರಾಮರಾವ್ ಶೆಲ್ಕೆ ಮತ್ತು ಶ್ರೀ ಸಾಯಿಬಾಬಾ ಸಂಸ್ಥಾನದ ಪುರೋಹಿತರಾದ ಶ್ರೀ.ಚಂದ್ರಕಾಂತ್ ಗೋರ್ಕರ್ ರವರುಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. 


ಶ್ರೀ ರಾಮನವಮಿ ಉತ್ಸವದ ಮೊದಲನೆಯ ದಿನದ ಅಂಗವಾಗಿ ಏರ್ಪಡಿಸಿದ್ದ ಅಖಂಡ ಶ್ರೀ ಸಾಯಿ ಸಚ್ಚರಿತ್ರೆಯ ಪಾರಾಯಣವನ್ನು ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ  ಶ್ರೀ.ಕಿಶೋರ್ ಮೋರೆಯವರು ಉದ್ಘಾಟಿಸಿದರು.


ಶ್ರೀ ರಾಮನವಮಿ ಉತ್ಸವದ ಮೊದಲನೆಯ ದಿನದ ಅಂಗವಾಗಿ ಸಮಾಧಿ ಮಂದಿರದಲ್ಲಿ ಶ್ರೀ ಸಾಯಿಬಾಬಾರವರ ಸಮಾಧಿ ಹಾಗೂ ಪವಿತ್ರ ಪಾದುಕೆಗಳ ಪೂಜೆಯನ್ನು ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ  ಶ್ರೀ.ಕಿಶೋರ್ ಮೋರೆ ಮತ್ತು ಅವರ ಧರ್ಮಪತ್ನಿ ಶ್ರೀಮತಿ.ಮಂಜುಶ್ರೀ ಮೋರೆಯವರು ನೆರವೇರಿಸಿದರು. 


ಶ್ರೀ ರಾಮನವಮಿ ಉತ್ಸವದ ಅಂಗವಾಗಿ ಚನ್ನೈನ ಸಾಯಿ ಭಕ್ತರಾದ ಶ್ರೀ.ಎಸ್.ದೇವರಾಜ್ ರವರು ಸಮಾಧಿ ಮಂದಿರ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಹೂವುಗಳಿಂದ ಸುಂದರವಾಗಿ ಅಲಂಕರಿಸಿದ್ದರು. 



ಶ್ರೀ ರಾಮನವಮಿ ಉತ್ಸವದ ಅಂಗವಾಗಿ ಶಿರಡಿ ಸಾಯಿಬಾಬಾ ಸಂಸ್ಥಾನದ ಆವರಣದಲ್ಲಿ ಮುಂಬೈನ ದ್ವಾರಕಾಮಾಯಿ ಮಂಡಳದ ವತಿಯಿಂದ ಶ್ರೀರಾಮ, ಸೀತಾದೇವಿ, ಲಕ್ಷ್ಮಣ ಹಾಗೂ ಹನುಮಂತ ದೇವರುಗಳ ಸುಂದರ ಮಹಾದ್ವಾರದ ನಿರ್ಮಾಣವನ್ನು ಮಾಡಲಾಗಿತ್ತು.  





ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment