Friday, December 20, 2013

ಭಾರತ ಸರ್ಕಾರದ ಅಸಂಪ್ರದಾಯಿಕ ಇಂಧನಗಳ ಸಚಿವಾಲಯದಿಂದ ಶಿರಡಿ ಸಾಯಿಬಾಬಾ ಸಂಸ್ಥಾನಕ್ಕೆ ಪ್ರಶಸ್ತಿ - ಕೃಪೆ: ಸಾಯಿಅಮೃತಧಾರಾ.ಕಾಂ

ಭಾರತ ಸರ್ಕಾರದ ಅಸಂಪ್ರದಾಯಿಕ ಇಂಧನಗಳ ಸಚಿವರಾದ ಶ್ರೀ.ಫರೂಕ್ ಅಬ್ದುಲ್ಲಾರವರು ಶಿರಡಿ ಸಾಯಿಬಾಬಾ ಸಂಸ್ಥಾನದ ಸೌರ ಉಗಿ ಅಡುಗೆ ಯೋಜನೆಯನ್ನು ಧಾರ್ಮಿಕ ಸಂಸ್ಥೆಗಳಲ್ಲಿಯೇ ಅತ್ಯಂತ ಬೃಹತ್ ಯೋಜನೆ ಎಂದು ಗುರುತಿಸಿ  ಇದೇ ತಿಂಗಳ 17ನೇ ಡಿಸೆಂಬರ್ 2013, ಮಂಗಳವಾರ ದಂದು ನವದೆಹಲಿಯ ಅಶೋಕ ಹೋಟೆಲ್ ನಲ್ಲಿ ನಡೆದ  ಸಮಾರಂಭದಲ್ಲಿ  ಪ್ರಶಸ್ತಿಯನ್ನು ನೀಡಿ ಗೌರವಿಸಿದರು. 

 
ಶಿರಡಿ ಸಾಯಿಬಾಬಾ ಸಂಸ್ಥಾನದ ಮುಖ್ಯ ಯಾಂತ್ರಿಕ ಅಧಿಕಾರಿಗಳಾದ  ಶ್ರೀ.ಅಮೃತ್  ಜಗ್ತಪ್ ರವರು ಈ ಪ್ರಶಸ್ತಿಯನ್ನು ಸಚಿವರಿಂದ ಸ್ವೀಕರಿಸಿದರು. ಅಸಂಪ್ರದಾಯಿಕ ಇಂಧನಗಳ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ಡಾ.ಸತೀಶ್ ಅಗ್ನಿಹೋತ್ರಿ ಹಾಗೂ ಜಂಟಿ ಕಾರ್ಯದರ್ಶಿಗಳಾದ ಶ್ರೀ.ತರುಣ್ ಕಪೂರ್ ಮತ್ತಿತರ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. 

ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment