Saturday, March 8, 2014

ಶ್ರೀಲಂಕಾ ಸರ್ಕಾರದ ರಕ್ಷಣಾ ಹಾಗೂ ನಗರಾಭಿವೃದ್ಧಿ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ. ಕಾಂ

ಶ್ರೀಲಂಕಾ ಸರ್ಕಾರದ ರಕ್ಷಣಾ ಹಾಗೂ ನಗರಾಭಿವೃದ್ಧಿ ಸಚಿವರಾದ ಶ್ರೀ.ಗೋಟಬಾಯ ರಾಜಪಕ್ಷರವರು ಇದೇ  ತಿಂಗಳ 8ನೇ ಮಾರ್ಚ್ 2014, ಶನಿವಾರ ದಂದು ತಮ್ಮ ಕುಟುಂಬ ಸಮೇತರಾಗಿ ಶಿರಡಿಗೆ ಭೇಟಿ ನೀಡಿ ಶ್ರೀ ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆಯವರು ಕೂಡ ಉಪಸ್ಥಿತರಿದ್ದರು.


ಸಮಾಧಿಯ ದರ್ಶನದ ನಂತರ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆಯವರು ಸನ್ಮಾನಿಸಿದರು.


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment