Thursday, May 29, 2014

ಶ್ರೀ ಸಾಯಿನಾಥ ಆಸ್ಪತ್ರೆಯ ವತಿಯಿಂದ ಉಚಿತ ನೇತ್ರ ತಪಾಸಣಾ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರದ ಆಯೋಜನೆ - ಕೃಪೆ: ಸಾಯಿಅಮೃತಧಾರಾ.ಕಾಂ

ಶಿರಡಿಯ ಲಯನ್ಸ್ ಕ್ಲಬ್ ಶ್ರೀ ಸಾಯಿಬಾಬಾ ಸಂಸ್ಥಾನಕ್ಕೆ ನೀಡಿರುವ ಉದಾರವಾದ ದೇಣಿಗೆಯ ಸಹಾಯದಿಂದ ಶ್ರೀ ಸಾಯಿನಾಥ ಆಸ್ಪತ್ರೆಯು ಮುಂದಿನ ತಿಂಗಳ ಬುಧವಾರ, 4ನೇ ಜೂನ್ 2014 ರಿಂದ ಶುಕ್ರವಾರ, 6ನೇ ಜೂನ್ 2014 ರವರೆಗೆ 3  ದಿನಗಳ ಉಚಿತ ನೇತ್ರ ತಪಾಸಣಾ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ  ಶಿಬಿರವನ್ನು ಹಮ್ಮಿಕೊಂಡಿದೆ.ಕಣ್ಣಿನ ತೊಂದರೆಯಿಂದ ಬಳಲುತ್ತಿರುವ ರೋಗಿಗಳು ಈ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಎಂದು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ ಅಜಯ್ ಮೋರೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇತ್ರ ತಜ್ಞರನ್ನು ಕಾಣಬಯಸುವ ರೋಗಿಗಳು 4ನೇ ಜೂನ್ 2014,ಬುಧವಾರ ದಂದು ಶ್ರೀ ಸಾಯಿನಾಥ ಅಸ್ಪತ್ರೆಯಲ್ಲಿ ನಡೆಯಲಿರುವ ಈ ಶಿಬಿರಕ್ಕೆ ಆಗಮಿಸಿ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು. ತಪಾಸಣೆಯ ನಂತರ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಅಗತ್ಯವಿರುವ ರೋಗಿಗಳು ತಮ್ಮ ಹೆಸರನ್ನು ನೋಂದಾಯಿಸಬೇಕಾಗಿರುತ್ತದೆ. 5ನೇ ಜೂನ್ 2014 ಮತ್ತು  6ನೇ ಜೂನ್ 2014 ರಂದು ನಡೆಯಲಿರುವ ಈ ಶಿಬಿರದಲ್ಲಿ ಹಲವಾರು ನುರಿತ ನೇತ್ರ ತಜ್ಞರು ಸುಮಾರು 100 ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಮಾಡಲಿದ್ದಾರೆ ಎಂದು ಶ್ರೀ. ಅಜಯ್ ಮೋರೆಯವರು ತಿಳಿಸಿದರು. 

ಆದ ಕಾರಣ, ಯಾವುದೇ ರೀತಿಯ ಕಣ್ಣಿನ ತೊಂದರೆಯಿಂದ ಬಳಲುತ್ತಿರುವ ರೋಗಿಗಳು ದಿನಾಂಕ 4ನೇ ಜೂನ್ 2014,ಬುಧವಾರ ದಂದು ದಂದು ಬೆಳಿಗ್ಗೆ 7 ರಿಂದ ಮಧ್ಯಾನ್ಹ 1 ಗಂಟೆಯ ಒಳಗೆ  ಶ್ರೀ ಸಾಯಿನಾಥ ಅಸ್ಪತ್ರೆಗೆ ಬಂದು ತಮ್ಮ ಹೆಸರನ್ನು ನೋಂದಾಯಿಸಿ ಈ ನೇತ್ರ ತಪಾಸಣಾ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಶ್ರೀ ಅಜಯ್ ಮೋರೆಯವರು ಮನವಿ ಮಾಡಿಕೊಂಡಿದ್ದಾರೆ.


ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್
ಆಂಗ್ಲ ಭಾಷೆಯಿಂದ ಕನ್ನಡಕ್ಕೆ: ಶ್ರೀಕಂಠ ಶರ್ಮ

No comments:

Post a Comment