Sunday, August 24, 2014

ವಿದ್ಯಾರ್ಥಿವೇತನ ಪರೀಕ್ಷೆಯಲ್ಲಿ 19ನೇ ರ‍್ಯಾಂಕ್ ಗಳಿಸಿದ ಶ್ರೀ ಸಾಯಿಬಾಬಾ ಸಂಸ್ಥಾನದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ-ಕೃಪೆ:ಸಾಯಿಅಮೃತಧಾರಾ.ಕಾಂ

ಶ್ರೀ ಸಾಯಿಬಾಬಾ ಸಂಸ್ಥಾನದ ಶೈಕ್ಷಣಿಕ ಪ್ಯಾಕೇಜ್ ನ ಅಡಿಯಲ್ಲಿ ನಡೆಸಲಾಗುತ್ತಿರುವ ಶ್ರೀ ಸಾಯಿಬಾಬಾ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿಯಾದ ಶ್ರೀ.ಸಾಯಿಪ್ರಕಾಶ್ ಸುಭಾಷ್ ಕೈರ್ನಾರ್ ಇತ್ತೀಚಿಗಷ್ಟೇ ಪೂರ್ಣಗೊಂಡ "4ನೇ ತರಗತಿಗೆ ನಡೆಸಲಾಗುವ ಪ್ರಾಥಮಿಕ ವಿದ್ಯಾರ್ಥಿವೇತನ ಪರೀಕ್ಷೆ" ಯಲ್ಲಿ  19ನೇ ರ‍್ಯಾಂಕ್ ಗಳಿಸುವ ಮೂಲಕ ವಿದ್ಯಾರ್ಥಿವೇತನವನ್ನು ಪಡೆದುಕೊಂಡಿದ್ದಾನೆ ಎಂದು ಇದೇ ತಿಂಗಳ ಶನಿವಾರ, 23ನೇ ಆಗಸ್ಟ್ 2014 ರಂದು ಶ್ರೀ ಸಾಯಿಬಾಬಾ ಸಂಸ್ಥಾನವು ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 


ಪರೀಕ್ಷೆಯಲ್ಲಿ ಪಾಸಾಗಲು ಕನಿಷ್ಠ 65 ಪ್ರತಿಶತ ಅಂಕಗಳನ್ನು ಗಳಿಸಬೇಕೆಂಬ ಕಠಿಣ ನಿಯಮವನ್ನು ವಿಧಿಸಲಾಗಿತ್ತು. ಶ್ರೀ ಸಾಯಿಬಾಬಾ ಆಂಗ್ಲ ಮಾಧ್ಯಮ ಶಾಲೆಯ ಕೇವಲ ಇಬ್ಬರು ವಿದ್ಯಾರ್ಥಿಗಳಾದ ಶ್ರೀ.ಸಾಯಿಪ್ರಕಾಶ್ ಸುಭಾಷ್ ಕೈರ್ನಾರ್ (19ನೇ  ರ‍್ಯಾಂಕ್) ಮತ್ತು ಶ್ರೀ.ಸಾನಿಯಾ ಕರೀಂ ಪಠಾಣ್ ( 29ನೇ ರ‍್ಯಾಂಕ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಅರ್ಹತೆಯನ್ನು ಗಳಿಸಿದರು. ಹಾಗಾಗಿ, ಪರಂಪರೆಯಂತೆ ವಿದ್ಯಾರ್ಥಿವೇತನ ಪರೀಕ್ಷೆಗಳಲ್ಲಿ ಸಂಸ್ಥಾನದ ಶಾಲೆಯ ವಿದ್ಯಾರ್ಥಿಗಳ  ಯಶೋಗಾಥೆಯು ಎಂದಿನಂತೆ ಈ ವರ್ಷವೂ ಮುಂದುವರಿಯಿತು. ಈ ವಿದ್ಯಾರ್ಥಿಗಳ ಯಶಸ್ಸಿಗೆ ಗುರುಗಳಾದ ಕುಮಾರಿ.ಜಯಂತಿ ಬೋಧಕ್ ಮತ್ತು ಶ್ರೀಮತಿ.ನೀತಾ ಪರದೇಶಿಯವರುಗಳು ನೀಡಿದ ಮಾರ್ಗದರ್ಶನ ಕಾರಣವಾಗಿರುತ್ತದೆ. 

ಶ್ರೀ ಸಾಯಿಬಾಬಾ ಸಂಸ್ಥಾನದ ತ್ರಿಸದಸ್ಯ ಸಮಿತಿಯ ಅಧ್ಯಕ್ಷರೂ ಹಾಗೂ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರೂ ಆದ ಶ್ರೀ.ಶಶಿಕಾಂತ ಕುಲಕರ್ಣಿ, ಸದಸ್ಯರೂ ಮತ್ತು ಜಿಲ್ಲಾ ಕಲೆಕ್ಟರ್ ಆದ ಶ್ರೀ.ಅನಿಲ್ ಕಾವಡೆ, ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಕುಂದನ ಕುಮಾರ್ ಸೋನಾವಾನೆ, ಉಪ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಪ್ಪಾ ಸಾಹೇಬ್ ಶಿಂಧೆ, ಎಲ್ಲಾ ಕಾರ್ಯ ನಿರ್ವಾಹಕ ಅಧಿಕಾರಿಗಳೂ ಹಾಗೂ ಶಾಲೆಯ  ಪ್ರಾಂಶುಪಾಲರಾದ ಶ್ರೀಮತಿ.ಇನಾಮದಾರ್ ರವರುಗಳು ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೇ ಮುಂದಿನ ವರ್ಷದ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೂ ಸಹ ಶುಭ ಹಾರೈಸಿದರು. 

ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್ 
ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment