Saturday, November 15, 2014

ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಮಕ್ಕಳ ದಿನಾಚರಣೆಯ ಆಚರಣೆ - ಕೃಪೆ: ಸಾಯಿಅಮೃತಧಾರಾ.ಕಾಂ

ಶಿರಡಿ ಸಾಯಿಬಾಬಾ ಸಂಸ್ಥಾನವು ಇದೇ ತಿಂಗಳ 14ನೇ ನವೆಂಬರ್ 2014, ಶುಕ್ರವಾರ ದಂದು ಪಂಡಿತ್ ಜವಾಹರ್ ಲಾಲ್ ನೆಹರೂರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ರವರು "ಸ್ವಚ್ಛ ಭಾರತ ಅಭಿಯಾನ" ಕಾರ್ಯಕ್ರಮವು ಅತ್ಯಂತ ಯಶಸ್ವಿ ಹಾಗೂ ಸಾಕಾರವಾಗಬೇಕಾದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಸಹ ಶ್ರದ್ಧೆಯಿಂದ ಮುಂದಾಳತ್ವ ತೆಗೆದುಕೊಳ್ಳಬೇಕಾದ ಅವಶ್ಯಕತೆಯಿದೆ. ಆಗ ಮಾತ್ರ  ಸಂಪೂರ್ಣ ಭಾರತವು ಸ್ವಚ್ಛವಾಗುತ್ತದೆ ಎಂದು ನಾವುಗಳು ಅಂದುಕೊಳ್ಳಬಹುದಾಗಿರುತ್ತದೆ  ಎಂದು ನುಡಿದರು.     



ಶಿರಡಿ ಸಾಯಿಬಾಬಾ ಸಂಸ್ಥಾನವು ತನ್ನ ಶೈಕ್ಷಣಿಕ ಯೋಜನೆಯ ಅಡಿಯಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರೂರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ರವರು  ಈ ಸಂಧರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಉಪ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಪ್ಪಾ ಸಾಹೇಬ್ ಶಿಂಧೆ, ನಿರ್ವಾಹಕ ಅಧಿಕಾರಿಗಳಾದ ಶ್ರೀ.ಸುಭಾಷ್ ಗಾರ್ಕಲ್, ಶ್ರೀ.ದಿಲೀಪ್ ಉಗಳೆ, ಪ್ರಾಂಶುಪಾಲರಾದ ಶ್ರೀ.ವಿಕಾಸ್ ಶಿವಗಜೆ, ಶ್ರೀ.ಶಿವಲಿಂಗ್ ಪಟಾಣೆ, ಶ್ರೀಮತಿ.ನೀತಾ ಚವಾಂಕೆ, ಶ್ರೀ.ಆಸೀಫ್ ತಂಬೋಲಿ, ಸಹಾಯಕ ಅಭಿಯಂತರರಾದ ಶ್ರೀ.ದಿನಕರ್ ದೇಸಾಯಿ, ಗೋಡೆ ಭಿತ್ತಿಪತ್ರ ಚಳುವಳಿಯ ಮುಖ್ಯಸ್ಥರಾದ ಶ್ರೀ.ಸುಶಾಂತ್ ಗೋಡ್ಕೆ, ಉಪಾಧ್ಯಾಯರುಗಳು, ಶಾಲಾ ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ಮಕ್ಕಳು ಸಹಸ್ರ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 


ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ.ರಾಜೇಂದ್ರ ಜಾಧವ್ ರವರು ಪ್ರತಿಯೊಬ್ಬರೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇರಿಸಿಕೊಂಡಲ್ಲಿ ಸ್ವಚ್ಛತೆಯ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವೇ ಇಲ್ಲ. ಆದುದರಿಂದ ನಾವುಗಳೆಲ್ಲರೂ ಈ ನಿಟ್ಟಿನಲ್ಲಿ ಕೈಜೋಡಿಸಿ ಕ್ರಮವನ್ನು ಕೈಗೊಳ್ಳುವ ಅಗತ್ಯವಿದೆ. 2ನೇ ಅಕ್ಟೋಬರ್ 2014 ರಂದು ನಾವುಗಳೆಲ್ಲರೂ ಮಾಡಿದ ಶಪಥದ ಒಳಾರ್ಥವನ್ನು ತಿಳಿದುಕೊಳ್ಳುವ ಅವಶ್ಯಕತೆಯಿದೆ. ಇದನ್ನು ಸಾಕಾರಗೊಳಿಸಬೇಕಾದರೆ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳಬೇಕೆಂಬುದನ್ನು ಸದಾಕಾಲ ಮನದಲ್ಲಿ ಇರಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಪ್ರತಿಯೊಬ್ಬರೂ ಪ್ರತಿನಿತ್ಯ ಸ್ನಾನ ಮಾಡುವುದು ಹಾಗೂ ತಮ್ಮ ಉಗುರನ್ನು ಕತ್ತರಿಸಿಕೊಂಡು ಶುಚಿಯಾಗಿ ಇರಬೇಕಾದ ಅಗತ್ಯವಿದೆ ಎಂದು ನುಡಿದರು. ಅಲ್ಲದೇ ಮಕ್ಕಳ ದಿನಾಚರಣೆಯ ಅಂಗವಾಗಿ ಸಭೆಯಲ್ಲಿ ನರೆದಿದ್ದ ಎಲ್ಲಾ ಮಕ್ಕಳಿಗೂ ಶುಭ ಕೋರಿದರು. ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತೆಯ ಸಂದೇಶವನ್ನು ಸಾರುವ  ಬಾಲ ಸ್ವಚ್ಛ ಭಾರತ ಅಭಿಯಾನದ ಸ್ಟಿಕರ್  ಅನ್ನು ಬಿಡುಗಡೆಗೊಳಿಸಲಾಯಿತು ಹಾಗೂ ಎಲ್ಲಾ ಮಕ್ಕಳಿಗೂ ವಿತರಿಸಲಾಯಿತು. ಈ ವಿಶೇಷ ಸ್ಟಿಕರ್ ಅನ್ನು ಜಿಲ್ಲಾ ಕಲೆಕ್ಟರ್ ಆದ ಶ್ರೀ.ಅನಿಲ್ ಕಾವಡೆಯವರ ಮಾರ್ಗದರ್ಶನದಲ್ಲಿ ತಯಾರಿಸಲಾಗಿರುತ್ತದೆ.  ಅಂತೆಯೇ  ಸ್ವಚ್ಛತೆಯ ಸಂದೇಶವನ್ನು ಸಾರುವ ಗೋಡೆಯ ಮೇಲೆ ಅಂಟಿಸಬಹುದಾದ ಭಿತ್ತಿಪತ್ರವನ್ನು ಸಹ ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಾಯಿಬಾಬಾ ಶಾಲೆಯ ಕುಮಾರಿ.ವಸಂತ ವಾಣಿಯವರು ಮಕ್ಕಳ ಪದ್ಯವೊಂದರ ವಾಚನ ಮಾಡಿದರು.  ಪ್ರಾಂಶುಪಾಲರಾದ ಶ್ರೀ.ವಿಕಾಸ್ ಶಿವಗಜೆಯವರು ಉದ್ಘಾಟನಾ ಭಾಷಣ ಮಾಡಿದ್ದಷ್ಟೇ ಅಲ್ಲದೇ ವಂದನಾರ್ಪಣೆಯನ್ನು ಸಹ ನೆರವೇರಿಸಿದರು. 

ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್, ಬೆಂಗಳೂರು 
ಆಂಗ್ಲ ಭಾಷೆಯಿಂದ ಕನ್ನಡಕ್ಕೆ: ಶ್ರೀಕಂಠ ಶರ್ಮ  

No comments:

Post a Comment