Tuesday, February 10, 2015

ಪರೀಕ್ಷಾ ಅವಧಿಯ ಹದಿನೆಂಟು ಐ.ಎ.ಎಸ್. ಅಧಿಕಾರಿಗಳ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಪರೀಕ್ಷಾ ಅವಧಿಯಲ್ಲಿದ್ದು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯ ವಿವಿಧ ವಿಭಾಗಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಹದಿನೆಂಟು ಐ.ಎ.ಎಸ್. ಅಧಿಕಾರಿಗಳು ಇದೇ ತಿಂಗಳ 10ನೇ ಫೆಬ್ರವರಿ 2015, ಮಂಗಳವಾರ ದಂದು ಶಿರಡಿಗೆ  ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಅಧಿಕಾರಿಗಳನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ರವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಪ್ಪಾಸಾಹೇಬ್ ಶಿಂಧೆಯವರು ಕೂಡ ಉಪಸ್ಥಿತರಿದ್ದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment