Sunday, March 22, 2015

ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಸ್ವಚ್ಛತಾ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯದ ಭರವಸೆ - ಕೃಪೆ: ಸಾಯಿಅಮೃತಧಾರಾ. ಕಾಂ

ಶ್ರೀ ಸಾಯಿಬಾಬಾ ಸಂಸ್ಥಾನದ ಆರೋಗ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆಯ ಕ್ರಮಗಳನ್ನು ಕೈಗೊಳ್ಳುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನವು ಹೆಚ್ಚಿನ ಸುರಕ್ಷತೆ ಮತ್ತು ಇತರ ಸೌಲಭ್ಯಗಳನ್ನು ತನ್ನ ಸ್ವಚ್ಛತಾ ಸಿಬ್ಬಂದಿಗೆ ನೀಡಲಿದೆ ಎಂದು ಕೇಂದ್ರ ಸ್ವಚ್ಛತಾ ಸಿಬ್ಬಂದಿ ಆಯೋಗದ ಸದಸ್ಯರಾದ ಶ್ರೀ.ವಿಜಯ ಕುಮಾರ್ ರವರು ಸುದ್ಧಿಗಾರರಿಗೆ ತಿಳಿಸಿದರು. 


ಈ ನಿಟ್ಟಿನಲ್ಲಿ ಇದೇ ತಿಂಗಳ 18ನೇ ಮಾರ್ಚ್ 2015, ಬುಧವಾರ ದಂದು ಮಧ್ಯಾನ್ಹ 2 ಗಂಟೆಗೆ ಶ್ರೀ ಸಾಯಿಬಾಬಾ ಸಂಸ್ಥಾನದ ಸಭಾಂಗಣದಲ್ಲಿ ವಿಚಾರ ಸಂಕಿರಣವೊಂದನ್ನು ಆಯೋಜಿಸಲಾಗಿತ್ತು. ಈ ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ಕೇಂದ್ರ ಸ್ವಚ್ಛತಾ ಸಿಬ್ಬಂದಿ ಆಯೋಗದ ಸದಸ್ಯರಾದ ಶ್ರೀ.ವಿಜಯ ಕುಮಾರ್ ರವರು ವಹಿಸಿದ್ದರು. ಶ್ರೀ ಸಾಯಿಬಾಬಾ ಸಂಸ್ಥಾನದ ಎಲ್ಲಾ ಸ್ವಚ್ಛತಾ ಸಿಬ್ಬಂದಿಗಳು, ಕಾರ್ಯಕಾರಿ ಅಧಿಕಾರಿ ಶ್ರೀ.ರಾಜೇಂದ್ರ ಜಾಧವ್, ಉಪ ಕಾರ್ಯಕಾರಿ ಅಧಿಕಾರಿ ಶ್ರೀ.ಅಪ್ಪಾ ಸಾಹೇಬ್ ಶಿಂಧೆ, ನಿರ್ವಹಣಾ ಅಧಿಕಾರಿಗಳಾದ ಶ್ರೀ.ಬಾವುಸಾಹೇಬ್ ಸಬಲೆ, ಶ್ರೀ.ಎಸ್.ಎನ್. ಗಾರ್ಕಲ್, ಶ್ರೀ.ಎಸ್.ವಿ.ಗಮೆ, ಶ್ರೀ.ಡಿ.ಟಿ.ಉಗಳೆ, ಶ್ರೀ.ಯು.ಪಿ.ಗೊಂದ್ಕರ್, ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಶ್ರೀ.ಪಾಂಡುರಂಗ ಕಾವಡೆಯವರುಗಳು ಈ ವಿಚಾರ ಸಂಕಿರಣದಲ್ಲಿ ಸಕ್ರೀಯವಾಗಿ ಭಾಗವಹಿಸಿದ್ದರು. 

ಶ್ರೀ ಸಾಯಿಬಾಬಾ ಸಂಸ್ಥಾನ ಮತ್ತು ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿ ಇರಿಸುವ ಸಲುವಾಗಿ ಶ್ರೀ ಸಾಯಿಬಾಬಾ ಸಂಸ್ಥಾನವು 377 ಸ್ವಚ್ಛತಾ ಸಿಬ್ಬಂದಿಯನ್ನು ತಾತ್ಕಾಲಿಕ ಮತ್ತು ಪೂರ್ಣಾವಧಿ ಆಧಾರದಲ್ಲಿ ನೇಮಕ ಮಾಡಿರುತ್ತದೆ. ಅಲ್ಲದೆ 667 ಸ್ವಚ್ಛತಾ ಸಿಬ್ಬಂದಿಯನ್ನು ಹೊರಗುತ್ತಿಗೆ ಸಂಸ್ಥೆಯೊಂದರ ಮೂಲಕ ಹಂಗಾಮಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ.  ಈ ಎಲ್ಲಾ ಸ್ವಚ್ಛತಾ ಸಿಬ್ಬಂದಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅವರುಗಳಿಗೆ ರಬ್ಬರ್ ಗಮ್  ಬೂಟುಗಳು, ಮಳೆಯಂಗಿ (ರೈನ್ ಕೋಟ್) ಗಳು, ಮುಖವಾಡ (ಮಾಸ್ಕ್) ಗಳು ಮತ್ತು ಕೈಚೀಲಗಳನ್ನು ವಿತರಿಸಲಾಗಿದೆ. ಅಷ್ಟೆ ಅಲ್ಲದೆ, ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಸಹ ಒದಗಿಸಲಾಗಿದೆ. ಎಲ್ಲಾ ಪೂರ್ಣಾವಧಿ ನೌಕರರಿಗೆ ಮನೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಹಂಗಾಮಿ ನೌಕರರಿಗೆ ಸಹ ವೈದ್ಯಕೀಯ ಸೌಲಭ್ಯವನ್ನು ನೀಡಲಾಗಿದೆ.  ಎಲ್ಲ ಸ್ವಚ್ಛತಾ ಸಿಬ್ಬಂದಿಗಳಿಗೆ ಸಂಸ್ಥಾನದ ಶ್ರೀ ಸಾಯಿಬಾಬಾ ಆಸ್ಪತ್ರೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆಯನ್ನು ಮಾಡಲಾಗುತ್ತದೆ ಎಂದು ಶ್ರೀ.ವಿಜಯ್ ಕುಮಾರ್ ರವರು ಸುದ್ಧಿಗಾರರಿಗೆ ತಿಳಿಸಿದರು. ಅಷ್ಟೆ ಅಲ್ಲದೆ ಸ್ವಚ್ಛತಾ ಸಿಬ್ಬಂದಿಗೆ ಹೆಚ್ಚಿನ ಸೌಲಭ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮೂರು ತಿಂಗಳಿಗೊಮ್ಮೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಅವರು ವಾಸಿಸುವ ಕೋಣೆಗಳನ್ನು ಅದಲು-ಬದಲು ಮಾಡಬೇಕೆಂದು ಕೂಡ ಶ್ರೀ ಸಾಯಿಬಾಬಾ ಸಂಸ್ಥಾನಕ್ಕೆ ತಾಕೀತು ಮಾಡಿದರು. 

ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್, ಬೆಂಗಳೂರು 
ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment