Sunday, May 31, 2015

ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ನಿವೃತ್ತ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭದ ಆಯೋಜನೆ - ಕೃಪೆ: ಸಾಯಿಅಮೃತಧಾರಾ.ಕಾಂ

ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನವು ಇದೇ ತಿಂಗಳ 31ನೇ ಮೇ 2015, ಭಾನುವಾರ ದಂದು ಇತ್ತೀಚೆಗೆ ನಿವೃತ್ತರಾದ ಸಂಸ್ಥಾನದ ಅಧಿಕಾರಿಗಳಾದ ಶ್ರೀ.ರಾಮರಾವ್ ಶೆಲ್ಕೆ, ಶ್ರೀ.ಸುಧಾಮ್ ಶೆಲ್ಕೆ, ಡಾ.ಭಾಸ್ಕರ ಚಂದಗುಡೆ, ಶ್ರೀ.ಮಚ್ಛೀಂದ್ರ ಧನೇಶ್ವರ್, ಶ್ರೀ.ರಾಯ್ ಬನ್ ಗುಂಜಾಲ್, ಶ್ರೀ.ಭಗವಾನ್ ಜುರಂಗೆ, ಶ್ರೀ.ಬಾವುಸಾಹೇಬ್ ಬೋಡ್ಗೆ, ಶ್ರೀ.ಜಮಾದಾರ್ ಸಯ್ಯದ್, ಶ್ರೀ.ಅರ್ಜುನ್ ಸುಫೇಕರ್ ಮತ್ತು ಶ್ರೀ. ಭಾಸ್ಕರ್ ಕೊಹ್ಲೆಯವರಿಗೆ  ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಿತ್ತು. ಈ ಸಮಾರಂಭದಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್, ಮುಖ್ಯ ಲೆಕ್ಕಾಧಿಕಾರಿಗಳಾದ ಶ್ರೀ.ದಿಲೀಪ್ ಜಿರ್ಪೆ, ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ.ದಿಲೀಪ್ ಉಗಳೆ, ಶ್ರೀ.ಅಶೋಕ್ ಅವುಟಿ ಹಾಗೂ ಎಲ್ಲಾ ವಿಭಾಗೀಯ ಪ್ರಮುಖರು ಉಪಸ್ಥಿತರಿದ್ದರು. 


ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ.ರಾಜೇಂದ್ರ ಜಾಧವ್ ರವರು ಶ್ರೀ ಸಾಯಿಬಾಬಾ ಸಂಸ್ಥಾನದ ಏಳಿಗೆ ಮತ್ತು ಪ್ರಗತಿಯ ನಿಟ್ಟಿನಲ್ಲಿ  ಸಂಸ್ಥಾನದ ಸಿಬ್ಬಂದಿ ವರ್ಗದವರು ಹೆಚ್ಚಿನ ಪರಿಶ್ರಮವಹಿಸಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾದ ಅವಶ್ಯಕತೆಯಿದೆ ಎಂಬುದಾಗಿ ನುಡಿದರು.

ದಿನೇ ದಿನೇ ಸಿಬ್ಬಂದಿ ವರ್ಗದವರ ಮೇಲಿನ ಕೆಲಸದ ಒತ್ತಡ ಬಹಳ ಹೆಚ್ಚಾಗುತ್ತಿದೆ  ಎಂದ ಶ್ರೀ.ರಾಜೇಂದ್ರ ಜಾಧವ್ ರವರು ತಮ್ಮ ಮಾತನ್ನು ಮುಂದುವರೆಸಿ ಭಾರತದ ಎಲ್ಲ ಕಡೆಗಳಿಂದ ಹಾಗೂ ವಿದೇಶಗಳಿಂದ ಹರಿದು ಬರುತ್ತಿರುವ ಭಕ್ತರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಂಸ್ಥಾನದ ಸಿಬ್ಬಂದಿಗಳು ಅತ್ಯಂತ ಮುತುವರ್ಜಿ ವಹಿಸಿ ದುಡಿಯುತ್ತಿದ್ದಾರೆ ಎಂದರು. ಹಾಗಾಗಿ, ಪ್ರತಿಯೋರ್ವ ಸಿಬ್ಬಂದಿಯೂ ಸಂಸ್ಥಾನವನ್ನು ತಮ್ಮ ಮನೆಯೆಂದು ತಿಳಿಯಬೇಕಾದ ಅವಶ್ಯಕತೆಯಿದೆ ಎಂದು ನುಡಿದರು. ಅಲ್ಲದೇ ಸಂಸ್ಥಾನದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಸಂಸ್ಥಾನದ ನಿವೃತ್ತ ನೌಕರರ ಸಲಹೆ ಸೂಚನೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ನೌಕರರ ಪರವಾಗಿ ಮಾತನಾಡಿದ ಶ್ರೀ.ರಾಮರಾವ್ ಶೆಲ್ಕೆ, ಶ್ರೀ.ಸುಧಾಮ್ ಶೆಲ್ಕೆ, ಡಾ.ಭಾಸ್ಕರ ಚಂದಗುಡೆಯವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು. ಅಂತೆಯೇ ಸಂಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ.ಯು.ಪಿ.ಗೋಂಡ್ಕರ್, ಶ್ರೀ.ಸುಭಾಷ್ ಗಾರ್ಕಲ್, ವೈದ್ಯಕೀಯ ಅಧೀಕ್ಷಕರಾದ ಡಾ.ಪ್ರಭಾಕರ್ ರಾವ್, ಉಪಾಧ್ಯಾಯರುಗಳಾದ ಶ್ರೀ.ಪಟಾಣಿ, ಶ್ರೀ.ವಿಷ್ಣು ತೋರಟ್  ರವರುಗಳು ಕೂಡ ಈ ಸಂದರ್ಭದಲ್ಲಿ ಮಾತನಾಡಿದರು.

ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್ 
ಕನ್ನಡ ಅನುವಾದ: ಶ್ರೀಕಂಠ ಶರ್ಮ 

Sunday, May 17, 2015

ಮಹಾರಾಷ್ಟ್ರ ಜಲ ಸಂಪನ್ಮೂಲ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವರಾದ ಶ್ರೀ. ಗಿರೀಶ್ ಮಹಾಜನ್ ರವರು ಇದೇ ತಿಂಗಳ 17ನೇ ಮೇ 2015, ಭಾನುವಾರದಂದು  ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

Saturday, May 2, 2015

ಶ್ರೀ ಸಾಯಿಬಾಬಾ ಸಂಸ್ಥಾನದ ವತಿಯಿಂದ ಬಡ ರೋಗಿಗಳಿಗೆ ಉಚಿತ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಶಿಬಿರದ ಆಯೋಜನೆ - ಕೃಪೆ: ಸಾಯಿಅಮೃತಧಾರಾ. ಕಾಂ

ಶ್ರೀ ಸಾಯಿಬಾಬಾ ಸಂಸ್ಥಾನವು ಶಿರಡಿಯ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಶ್ರೀ ಸಾಯಿನಾಥ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಿತ್ತು. ಈ ಶಿಬಿರದಲ್ಲಿ ಒಟ್ಟು 53 ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು ಎಂದು ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ರವರು ಇದೇ ತಿಂಗಳ 2ನೇ ಮೇ 2015, ಶನಿವಾರ ದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸುದ್ದಿಗಾರರಿಗೆ  ತಿಳಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ.ಜಾಧವ್ ರವರು ಶ್ರೀ ಸಾಯಿಬಾಬಾ ಸಂಸ್ಥಾನವು ಶಿರಡಿಯ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಶ್ರೀ ಸಾಯಿನಾಥ ಆಸ್ಪತ್ರೆಯಲ್ಲಿ ಕಳೆದ ತಿಂಗಳ 29ನೇ ಏಪ್ರಿಲ್ 2015 ಮತ್ತು 30ನೇ ಏಪ್ರಿಲ್  2015 ರಂದು  ಉಚಿತ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಿತ್ತು ಹಾಗೂ ಈ ಶಿಬಿರದಲ್ಲಿ ಪ್ರಖ್ಯಾತ ನೇತ್ರ ತಜ್ಞರಾದ ಡಾ.ಸುನೀಲ್ ಸೊಂಟಕ್ಕೆಯವರು 53 ಬಡ ಹಾಗೂ ಅರ್ಹ ರೋಗಿಗಳಿಗೆ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಮುಗಿಸಿದರು.  ಈ ಶಿಬಿರದಲ್ಲಿ ಶಿರಡಿಯ ಲಯನ್ಸ್ ಕ್ಲಬ್ ನ ಸದಸ್ಯರುಗಳಾದ ಶ್ರೀ.ವಿಶಾಲ್ ತಿಡ್ಕೆ, ಡಾ.ರವೀಂದ್ರ ಅಂತ್ರೆ, ಶ್ರೀ.ವಾಲ್ಮೀಕ್ ತುರ್ಕಣೆ ಮತ್ತು ಶ್ರೀ.ಕಮಲೇಶ್ ಘಡಿವಾಲ್ ರವರುಗಳು ಕೂಡ ಸಕ್ರೀಯವಾಗಿ ಭಾಗವಹಿಸಿದ್ದರು ಎಂದು ತಿಳಿಸಿದರು. 

ಶ್ರೀ ಸಾಯಿನಾಥ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಪ್ರಭಾಕರ್ ರಾವ್, ವೈದ್ಯಕೀಯ ಅಧೀಕ್ಷಕರಾದ ಡಾ.ಕೌಶಿಕ್ ಕುಮಾರ್ ಮಕ್ವಾನ, ನೇತ್ರ ತಜ್ಞರಾದ ಡಾ.ಸುನೀಲ್ ಸೊಂಟಕ್ಕೆ ಹಾಗೂ ಶ್ರೀ ಸಾಯಿನಾಥ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರುಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿ ಶಿಬಿರವು ಅತ್ಯಂತ ಯಶಸ್ವಿಯಾಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು.  

ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್, ಬೆಂಗಳೂರು 
ಕನ್ನಡ ಅನುವಾದ: ಶ್ರೀಕಂಠ ಶರ್ಮ 

Friday, May 1, 2015

ವಿಶ್ವ ಕಾರ್ಮಿಕ ದಿನದ ಅಂಗವಾಗಿ ಶ್ರೀ ಸಾಯಿಬಾಬಾ ಸಂಸ್ಥಾನದ ವತಿಯಿಂದ ಸಂಸ್ಥಾನದ ಕಾರ್ಮಿಕರ ಸೊಸೈಟಿಯ ಅಧ್ಯಕ್ಷರಿಗೆ ಸನ್ಮಾನ - ಕೃಪೆ: ಸಾಯಿಅಮೃತಧಾರಾ.ಕಾಂ

ವಿಶ್ವ ಕಾರ್ಮಿಕ ದಿನದ ಅಂಗವಾಗಿ ಇದೇ ತಿಂಗಳ 1ನೇ  ಮೇ 2015, ಶುಕ್ರವಾರ ದಂದು ಸಂಸ್ಥಾನದ ಕಾರ್ಮಿಕರ ಸೊಸೈಟಿಯ ಅಧ್ಯಕ್ಷರಾದ ಶ್ರೀ.ರಾಜೇಂದ್ರ ಜಗ್ತಪ್ ರವರಿಗೆ ಶ್ರೀ ಸಾಯಿಬಾಬಾ ಸಂಸ್ಥಾನದ  ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ರವರು ಸನ್ಮಾನ ಮಾಡಿದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ