Monday, August 3, 2015

ಶ್ರೀ ಸಾಯಿಬಾಬಾರವರ ಶೇಜಾರತಿ ಮತ್ತು ಕಾಕಡಾರತಿ ವೇಳೆಯಲ್ಲಿ ಯಾವುದೇ ಬದಲಾವಣೆ ಇಲ್ಲ - ಕೃಪೆ: ಸಾಯಿಅಮೃತಧಾರಾ. ಕಾಂ

ಶ್ರೀ ಸಾಯಿಬಾಬಾ ಸಂಸ್ಥಾನದ ತ್ರಿಸದಸ್ಯ ಸಮಿತಿಯು ಈ ಹಿಂದೆ ಶ್ರೀ ಸಾಯಿಬಾಬಾರವರ ಶೇಜಾರತಿ ಮತ್ತು ಕಾಕಡಾರತಿ ವೇಳೆಯಲ್ಲಿ ಪ್ರಾಯೋಗಿಕವಾಗಿ ಅಲ್ಪ ಸ್ವಲ್ಪ ಬದಲಾವಣೆಯನ್ನು ಮಾಡಲು ಯೋಜನೆ ಹಾಕಿಕೊಂಡಿತ್ತು. ಆದರೆ, ಸ್ಥಳೀಯ ಗ್ರಾಮಸ್ಥರ ಭಾವನೆಗಳಿಗೆ ಓಗೊಟ್ಟು ಹಾಗೂ ಸ್ಥಳೀಯ ಗ್ರಾಮ ಪ್ರತಿನಿಧಿಗಳ ಆದೇಶದ ಮೇರೆಗೆ ಶೇಜಾರತಿ ಮತ್ತು ಕಾಕಡಾರತಿ ವೇಳೆಯಲ್ಲಿ ಯಾವುದೇ ಬದಲಾವಣೆಯನ್ನು ಸದ್ಯಕ್ಕೆ ಮಾಡದೇ ಇರಲು ಶ್ರೀ ಸಾಯಿಬಾಬಾ ಸಂಸ್ಥಾನವು ನಿರ್ಧರಿಸಿದೆ ಎಂದು ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ರಾಜೇಂದ್ರ ಜಾಧವ್ ರವರು ಇದೇ ತಿಂಗಳ 1ನೇ ಆಗಸ್ಟ್ 2015, ಶನಿವಾರ ದಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. 

ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್, ಬೆಂಗಳೂರು 
ಕನ್ನಡಕ್ಕೆ: ಶ್ರೀಕಂಠ ಶರ್ಮ

No comments:

Post a Comment